ADVERTISEMENT

ಬೆಂಗಳೂರು ನಗರದಲ್ಲಿ ಕಳವು: ನೇಪಾಳದಲ್ಲಿ ಸಿಕ್ಕಿಬಿದ್ದ ಆರೋಪಿಗಳು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 21:42 IST
Last Updated 6 ಡಿಸೆಂಬರ್ 2021, 21:42 IST
   

ಬೆಂಗಳೂರು: ಸದಾಶಿವನಗರ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರುಆರೋಪಿಗಳುನೇಪಾಳದಲ್ಲಿಪೊಲೀಸರಿಗೆ ಸೆರೆ ಸಿಕ್ಕಿದ್ದಾರೆ.

‘ಉದ್ಯಮಿ ವಾಂಕಿ ಪೆಂಚಾಲಯ್ಯ ಎಂಬುವರ ಮನೆಯಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಲಾಲ್ ಚಂದ್ರಸಿಂಗ್ ಶಾಹಿ ಠಾಕೂರ್ ಹಾಗೂ ಕೋಮಲಾ ಎಂಬುವರೇ ಕೃತ್ಯ ಎಸಗಿದ್ದ ಅನುಮಾನವಿತ್ತು. ಇದೀಗ ಅವರಿಬ್ಬರನ್ನು ನೇಪಾಳ ಪೊಲೀಸರುಬಂಧಿಸಿದ್ದಾರೆ. ಇಬ್ಬರನ್ನೂ ನಗರಕ್ಕೆ ಕರೆತರಲು ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT