ಬೆಂಗಳೂರು: ಕದ್ದ ದ್ವಿಚಕ್ರ ವಾಹನವನ್ನು ಕಡಿಮೆ ದರಕ್ಕೆ ಮಾರಲು ಯತ್ನಿಸಿದ್ದ ಆರೋಪಿಯನ್ನು ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಇಮ್ತಿಯಾಜ್ (40) ಬಂಧಿತ. ಹೆಬ್ಬಾಳ ನಿವಾಸಿಯಾಗಿರುವ ಈತನಿಂದ ₹1.5 ಲಕ್ಷ ಮೌಲ್ಯದ ನಾಲ್ಕು ಸ್ಕೂಟರ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
‘ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ಕೂಟರ್ ಮಾರಾಟ ಮಾಡಲು ಮುಂದಾಗಿರುವ ಕುರಿತು ಇದೇ 20ರ ಸಂಜೆ ಮಾಹಿತಿ ಲಭಿಸಿತ್ತು. ಆರೋಪಿಯನ್ನು ಬಂಧಿಸಲು ಹೋದಾಗ ಪರಾರಿಯಾಗಲು ಪ್ರಯತ್ನಿಸಿದ್ದ. ಹಿಡಿದು ವಿಚಾರಿಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಈತನ ಬಂಧನದಿಂದ ಹೆಬ್ಬಾಳ, ಕೆ.ಆರ್.ಪುರ ಹಾಗೂ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ’ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.