ADVERTISEMENT

ಉಪ್ಪಾರ ಪ್ರತಿಭಾ ಪುರಸ್ಕಾರ ವಿತರಣೆ 14ರಂದು

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 17:51 IST
Last Updated 6 ಜುಲೈ 2019, 17:51 IST

ಬೆಂಗಳೂರು: ಅಖಿಲ ಕರ್ನಾಟಕ ಉಪ್ಪಾರ ಮಹಾಸಭಾ ಹಾಗೂ ಧಾರವಾಡ ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದ ವತಿಯಿಂದ
ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ 2018–19 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಇದೇ 14 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಸಂಘದ ಅಧ್ಯಕ್ಷ ವಿಷ್ಣು ಲಾತೂರ್, ‘ಎಸ್ಸೆಸ್ಸೆಲ್ಸಿ, ದ್ವಿತೀಯಪಿ.ಯು. ಪರೀಕ್ಷೆಗಳಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆಪ್ರತಿಭಾಪುರಸ್ಕಾರನೀಡಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಉಪ್ಪಾರ ಸಮಾಜದ ಯುವಕ–ಯುವತಿಯರಿಗೆ ಸನ್ಮಾನ ಮಾಡಲಾಗುವುದು. ಅದೇ ದಿನ ವೃತ್ತಿ ತರಬೇತಿ ಕುರಿತು ಕೌನ್ಸೆಲಿಂಗ್‌ ಕೂಡಾ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಆಸಕ್ತ ವಿದ್ಯಾರ್ಥಿಗಳು ಭಾವಚಿತ್ರ, ಅಂಕಪಟ್ಟಿ ಹಾಗೂ ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು’ ಎಂದರು.ಸ್ಥಳ: ಹೋಟೆಲ್ ಮಯೂರ, ಆದಿತ್ಯ ರೆಸಾರ್ಟ್‌, ನವಲೂರು ಬಸ್‌ ನಿಲ್ದಾಣದ ಬಳಿ, ಪಿ.ಬಿ.ರಸ್ತೆ, ಹುಬ್ಬಳ್ಳಿ

ADVERTISEMENT

ಸಂಪರ್ಕ: 9448899600

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.