ADVERTISEMENT

ಜೂಜಾಟದಲ್ಲಿ ಭಾಗಿ; ಕಾನ್‌ಸ್ಟೆಬಲ್‌ಗಳ ಅಮಾನತು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 19:06 IST
Last Updated 12 ನವೆಂಬರ್ 2020, 19:06 IST

ಬೆಂಗಳೂರು: ಜೂಜಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಉಪ್ಪಾರಪೇಟೆಯ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕಾನ್‌ಸ್ಟೆಬಲ್‌ಗಳಾದ ಮಲ್ಲೇಶ್ ಹಾಗೂ ಗವಿಸಿದ್ದೇಶ್ ಭಾಗಿಯಾಗಿದ್ದ ಬಗ್ಗೆ ತನಿಖಾಧಿಕಾರಿ ವರದಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

‘ಇನ್‌ಸ್ಪೆಕ್ಟರ್ ಆರ್.ಎಸ್.ಚೌಧರಿ ನೇತೃತ್ವದ ತಂಡ, ಜೆ.ಪಿ. ನಗರದ ಹೋಟೆಲ್‌ವೊಂದರ ಮೇಲೆ ಅಕ್ಟೋಬರ್ 19ರಂದು ದಾಳಿ ಮಾಡಿತ್ತು. ಮಲ್ಲೇಶ್ ಹಾಗೂ ಗವಿಸಿದ್ದಪ್ಪ ಸಹ ಜೂಜಾಟದಲ್ಲಿ ನಿರತರಾಗಿದ್ದರು. ಅವರಿಬ್ಬರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.