ADVERTISEMENT

ಲೈಟರ್‌ನಿಂದ ಕಾರು ಸುಟ್ಟರು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 22:09 IST
Last Updated 18 ಫೆಬ್ರುವರಿ 2020, 22:09 IST

ಬೆಂಗಳೂರು: ಜಯನಗರದ 9ನೇ ಹಂತದಲ್ಲಿ ನಾಲ್ವರು ದುಷ್ಕರ್ಮಿಗಳು ಲೈಟರ್‌ನಿಂದ ಕಾರೊಂದಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.

‘ಫೆ. 2ರ ನಸುಕಿನಲ್ಲಿ ದುಷ್ಕರ್ಮಿಗಳು ಎಸಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸನಾವುಲ್ಲಾ ಖಾನ್ ಎಂಬುವರಿಗೆ ಸೇರಿದ್ದ ಕಾರಿಗೆ ಹಾನಿ ಆಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಲಕ್‌ ನಗರ ಪೊಲೀಸರು ಹೇಳಿದರು.

‘ಹಳೇ ವೈಷಮ್ಯದಿಂದಾಗಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.