ADVERTISEMENT

ವ್ಹೀಲಿಂಗ್ ಮಾಡಲು ದ್ವಿಚಕ್ರ ವಾಹನ ಕಳವು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 18:04 IST
Last Updated 25 ನವೆಂಬರ್ 2022, 18:04 IST

ಬೆಂಗಳೂರು: ವ್ಹೀಲಿಂಗ್ ಮಾಡುವುದಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನೆಲಮಂಗಲದ ಅಮೃತ್‌ ಗೌಡ (19) ಹಾಗೂ ಶ್ರೀನಿವಾಸ್ (23) ಬಂಧಿತರು. ಇವರಿಂದ ₹ 2 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಗಳು, ವ್ಹೀಲಿಂಗ್ ಮಾಡುವ ಉದ್ದೇಶದಿಂದ ದ್ವಿಚಕ್ರ ವಾಹನ ಕದಿಯುತ್ತಿದ್ದರು. ಕೆಲ ದಿನ ವಾಹನಗಳಲ್ಲಿ ವ್ಹೀಲಿಂಗ್ ಮಾಡಿ, ನಂತರ ನಿರ್ಜನ ಪ್ರದೇಶಗಳಲ್ಲಿ ನಿಲ್ಲಿಸುತ್ತಿದ್ದರು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.