ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ವಿತರಣೆ ಹಾಗೂ ಭ್ರಷ್ಟಾಚಾರದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತುರ್ತುಚಿಕಿತ್ಸಾ ವೈದ್ಯಾಧಿಕಾರಿ ಡಾ. ಶಂಕರ್ ಕೆ.ಎನ್. ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತು ಮಾಡಿದೆ.
ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
‘ಡಾ. ಶಂಕರ್ ಕೆ.ಎನ್. ಅವರು ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿರುವುದು ಹಾಗೂ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದೆ. ಈ ಪ್ರಕರಣದಲ್ಲಿ ದೊರಕಿದ ದಾಖಲೆಗಳು ಹಾಗೂ ಘಟನೆಯನ್ನು ಪರಿಶೀಲಿಸಿದಾಗ ಮೆಲ್ನೋಟಕ್ಕೆ ಆರೋಪ ಎಸಗಿದಂತೆ ಕಂಡುಬಂದಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
‘ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅವರನ್ನು ಅಮಾನತಿನಲ್ಲಿ ಇರಿಸಲಾಗುವುದು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.