ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಶೌಚಾಲಯದಲ್ಲೇ ರಾಘವೇಂದ್ರ (40) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಬನ್ನೇರುಘಟ್ಟ ನಿವಾಸಿ ಆಗಿದ್ದ ರಾಘವೇಂದ್ರ, ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಚಿಕಿತ್ಸೆ ಪಡೆಯಲು ಗುರುವಾರ ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ತಮ್ಮ ಪತ್ನಿಯ ಸೀರೆಯಿಂದಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ವಿ.ವಿ.ಪುರ ಪೊಲೀಸರು ಹೇಳಿದರು.
’ರಾಘವೇಂದ್ರ ಅವರನ್ನು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದ ವೈದ್ಯರು, ರಕ್ತ ತಪಾಸಣೆ ಮಾಡಿದ್ದರು. ಅದರ ವರದಿ ಬಂದಾಗ, ಮಾರಣಾಂತಿಕ ಕಾಯಿಲೆ ಇರುವುದು ಗೊತ್ತಾಗಿತ್ತು. ಅದರಿಂದ ನೊಂದು ಈ ರೀತಿ ಮಾಡಿಕೊಂಡಿದ್ದಾರೆ. ಪತ್ನಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.