ADVERTISEMENT

ರಾಜೇಂದ್ರ ಸಿಂಗ್‌ ಬಾಬುಗೆ ವಿಷ್ಣುವರ್ಧನ್‌ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 20:23 IST
Last Updated 13 ಸೆಪ್ಟೆಂಬರ್ 2019, 20:23 IST

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಅಭಿನವ ಭಾರ್ಗವ ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ’ಗೆ ನಿರ್ದೇಶಕಎಸ್.ವಿ. ರಾಜೇಂದ್ರಸಿಂಗ್ ಬಾಬು ಹಾಗೂ ‘ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿ’ಗೆ ಲೇಖಕಿಪ್ರೊ. ಮೀನಾ ದೇಶಪಾಂಡೆ ಮಹಿಷಿ ಆಯ್ಕೆಯಾಗಿದ್ದಾರೆ.

ಕಸಾಪ ಅಧ್ಯಕ್ಷ ಮನು ಬಳಿಗಾರ್‌ ಅಧ್ಯಕ್ಷತೆಯ ಆಯ್ಕೆ ಸಮಿತಿ ಪ್ರಶಸ್ತಿಗಳನ್ನು ಶುಕ್ರವಾರ ಘೋಷಿಸಿದೆ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ ₹ 25ಸಾವಿರ ಹಾಗೂ ‘ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿ’ ₹10ಸಾವಿರ ನಗದು ಬಹುಮಾನ ಹೊಂದಿದೆ. ಅ.11ರಂದು ಸಂಜೆ 5.30ಕ್ಕೆ ಪರಿಷತ್ತಿನಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT