ADVERTISEMENT

‘ಪ್ರಜಾಪ್ರಭುತ್ವದ ಯಶಸ್ಸಿಗೆ ಮಾಧ್ಯಮ ಅಗತ್ಯ’

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2018, 19:59 IST
Last Updated 31 ಡಿಸೆಂಬರ್ 2018, 19:59 IST
ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಹೊರತಂದಿರುವ ನೂತನ ವರ್ಷದ ಕ್ಯಾಲೆಂಡರ್‌ ಅನ್ನು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಬಿಡುಗಡೆ ಮಾಡಿದರು. ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್‌ ಹಾಗೂ ನಿರ್ದೇಶಕರು ಇದ್ದರು
ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಹೊರತಂದಿರುವ ನೂತನ ವರ್ಷದ ಕ್ಯಾಲೆಂಡರ್‌ ಅನ್ನು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಬಿಡುಗಡೆ ಮಾಡಿದರು. ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್‌ ಹಾಗೂ ನಿರ್ದೇಶಕರು ಇದ್ದರು   

ಬೆಂಗಳೂರು: ಉತ್ತಮ ಸಮಾಜ ನಿರ್ಮಾಣಕ್ಕೆ, ಪ್ರಜಾಪ್ರಭುತ್ವದ ಆಶೋತ್ತರಗಳ ಸಾಕಾರಕ್ಕೆ ಮಾಧ್ಯಮ ಕ್ಷೇತ್ರ ಕೂಡ ನ್ಯಾಯಾಂಗದಂತೆ ಸ್ವತಂತ್ರವಾಗಿ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿಪಿ. ವಿಶ್ವನಾಥಶೆಟ್ಟಿ ಪ್ರತಿಪಾದಿಸಿದರು.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 70ನೇ ವರ್ಷದ ವಿಶೇಷ ಲಾಂಛನ ಮತ್ತು ನೂತನ ವರ್ಷದ ಕ್ಯಾಲೆಂಡರ್‌ ಅನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

‘ಮಾಧ್ಯಮ ಮತ್ತು ನ್ಯಾಯಾಂಗ ಒಂದಕ್ಕೊಂದು ಪೂರಕವಾಗಿ ಹೊಂದಿಕೊಂಡು ತಮ್ಮ ಕರ್ತವ್ಯ ನಿರ್ವಹಿಸಿದರೆ ಪ್ರಜಾಪ್ರಭುತ್ವದ ಯಶಸ್ಸು ಸಾಧ್ಯ. ಅದರಿಂದ ದುರಾಡಳಿತ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು’ ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

ಸಂಘದ ಅಧ್ಯಕ್ಷ ಎಂ.ಎಸ್. ರಾಜೇಂದ್ರಕುಮಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.