ADVERTISEMENT

ವಿಶ್ವಾಸ್‌ಗೆ ಬನ್ನಂಜೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 21:09 IST
Last Updated 21 ಜನವರಿ 2020, 21:09 IST
ಎಚ್‌.ಆರ್‌.ವಿಶ್ವಾಸ್
ಎಚ್‌.ಆರ್‌.ವಿಶ್ವಾಸ್   

ಬೆಂಗಳೂರು: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದಿಂದ ನೀಡಲಾಗುವ ‘ಬನ್ನಂಜೆ ಪ್ರಶಸ್ತಿ’ಗೆ ಮಂಗಳೂರಿನ ಸಂಸ್ಕೃತ ವಿದ್ವಾಂಸ ಎಚ್.ಆರ್.ವಿಶ್ವಾಸ್ ಆಯ್ಕೆಯಾಗಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಕಾರ್ಯದರ್ಶಿ ವೀಣಾ ಬನ್ನಂಜೆ,‘ಪ್ರಶಸ್ತಿ ₹25 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಮಲ್ಲೇಪುರಂ ಜಿ.ವೆಂಕಟೇಶ್, ಎಚ್.ವಿ.ನಾಗರಾಜ್ ರಾವ್ ಹಾಗೂ ಉಮಾಕಾಂತ್ ಭಟ್ ಅವರನ್ನೊಳಗೊಂಡ ಸಮಿತಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ’ ಎಂದು ಹೇಳಿದರು.

‘29ರಂದು ನಗರದ ಗಾಯನ ಸಮಾಜದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬನ್ನಂಜೆ ಗೋವಿಂದಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.