ADVERTISEMENT

ಕಾಂಗ್ರೆಸ್‌ ಪ್ರತಿಭಟನೆಗೆ ‘ಒಕ್ಕಲಿಗ ಟ್ಯಾಗ್‌’: ಸದಾನಂದಗೌಡ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2019, 20:15 IST
Last Updated 12 ಸೆಪ್ಟೆಂಬರ್ 2019, 20:15 IST
   

ಬೆಂಗಳೂರು: ‘ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಅವರನ್ನು ಬೆಂಬಲಿಸಿ ಬುಧವಾರ ನಡೆಸಿದ ಪ್ರತಿಭಟನೆ ಕಾಂಗ್ರೆಸ್‌ ಪ್ರಾಯೋಜಿತ, ಅದಕ್ಕೂ ಒಕ್ಕಲಿಗ ಸಮುದಾಯಕ್ಕೂ ಸಂಬಂಧವಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

ಆ ಪ್ರತಿಭಟನೆಯಲ್ಲಿ ಇದ್ದ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ, ದಿನೇಶ್‌ ಗುಂಡೂರಾವ್‌, ಉಗ್ರಪ್ಪ ಇವರ್‍ಯಾರೂ ಒಕ್ಕಲಿಗರಲ್ಲ. ಆದ್ದರಿಂದ, ಪ್ರತಿಭಟನೆಗೆ ಒಕ್ಕಲಿಗರ ಅಸ್ಮಿತೆಯ ಹೋರಾಟ ಎಂದು ಹಣೆಪಟ್ಟಿ ಕಟ್ಟುವುದು ಬೇಡ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT