ADVERTISEMENT

ಕೆಪಿಎಸ್‌ಸಿ ಸದಸ್ಯರಾಗಿ ನಿವೃತ್ತ ಐಎಎಸ್‌ ಅಧಿಕಾರಿ ವಿ.ಪಿ.ಇಕ್ಕೇರಿ ನೇಮಕ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 15:22 IST
Last Updated 13 ಜುಲೈ 2020, 15:22 IST
ಕೆಪಿಎಸ್‌ಸಿ
ಕೆಪಿಎಸ್‌ಸಿ   

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ವಿ.ಪಿ. ಇಕ್ಕೇರಿ ಅವರನ್ನು ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಿಸಿದೆ.

ಕೆಪಿಎಸ್‌ಸಿಯಲ್ಲಿ ಅಧ್ಯಕ್ಷರು ಸೇರಿ ಒಟ್ಟು 14 ಸದಸ್ಯರಿದ್ದರು. ಈ ಪೈಕಿ, ಸದಸ್ಯರಾಗಿದ್ದ ಲಕ್ಷ್ಮೀ ನರಸಯ್ಯ ಅವರು ಸೋಮವಾರ ನಿವೃತ್ತಿಯಾದರು. ಒಂದು ಸದಸ್ಯ ಸ್ಥಾನ ಖಾಲಿಯಾದ ಹಿನ್ನೆಲೆಯಲ್ಲಿ ಇಕ್ಕೇರಿ ಅವರನ್ನು ನೇಮಿಸಲಾಗಿದೆ.

ಇಕ್ಕೇರಿ ಅವರನ್ನು ಅಧಿಕಾರಿ ಸದಸ್ಯರು ಆಗಿ ನೇಮಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.