ADVERTISEMENT

ಜಲ ಸಂರಕ್ಷಣೆ ಮುಂದಿನ ಪೀಳಿಗೆಗೆ ಬಳುವಳಿ: ಶಾಸಕ ಅರವಿಂದ ಲಿಂಬಾವಳಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 19:31 IST
Last Updated 31 ಜುಲೈ 2021, 19:31 IST
ಗರುಡಾಚಾರ್ ಪಾಳ್ಯದ ಕೆರೆ ಅಭಿವೃದ್ಧಿಗೆ ಶಾಸಕ ಅರವಿಂದ ಲಿಂಬಾವಳಿ ಹಾಗೂ ಸ್ಥಳೀಯ ಮುಖಂಡ ನಿತಿನ್ ಪುರುಷೋತ್ತಮ ಭೂಮಿ ಪೂಜೆ ನೆರವೇರಿಸಿದರು. ಮುಖಂಡರಾದ ಮನೋಹರ ರೆಡ್ಡಿ, ಅನಂತ ರಾಮಯ್ಯ, ಮಹೇಂದ್ರ ಮೋದಿ, ರವಿ ಹಾಗೂ ಇತರರು ಇದ್ದರು.
ಗರುಡಾಚಾರ್ ಪಾಳ್ಯದ ಕೆರೆ ಅಭಿವೃದ್ಧಿಗೆ ಶಾಸಕ ಅರವಿಂದ ಲಿಂಬಾವಳಿ ಹಾಗೂ ಸ್ಥಳೀಯ ಮುಖಂಡ ನಿತಿನ್ ಪುರುಷೋತ್ತಮ ಭೂಮಿ ಪೂಜೆ ನೆರವೇರಿಸಿದರು. ಮುಖಂಡರಾದ ಮನೋಹರ ರೆಡ್ಡಿ, ಅನಂತ ರಾಮಯ್ಯ, ಮಹೇಂದ್ರ ಮೋದಿ, ರವಿ ಹಾಗೂ ಇತರರು ಇದ್ದರು.   

ಕೆ.ಆರ್.ಪುರ: ‘ನಗರಗಳಲ್ಲಿ ನೀರಿನ ಬವಣೆ ಹೆಚ್ಚುತ್ತಿರುವುದರಿಂದ ಜಲಮೂಲಗಳನ್ನು ಸಂರಕ್ಷಿಸುವ ಜೊತೆಗೆ ಮುಂದಿನ ಪೀಳಿಗೆಗೆ ನೀರು ಲಭ್ಯವಾಗುವಂತೆ ಮಾಡಬೇಕಿದೆ’ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಇಲ್ಲಿನ ಗರುಡಚಾರ್ ಪಾಳ್ಯದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆ ಮಾಡುವುದೇ ಮುಂದಿನ ಪೀಳಿಗೆಗೆ ನಾವು ನೀಡುವ ಬಳುವಳಿ. ಇತ್ತೀಚಿನ ದಿನಗಳಲ್ಲಿ ಜಲಮೂಲಗಳು ಕಣ್ಮರೆಯಾಗುತ್ತಿವೆ. ಬಿಜೆಪಿ ಸರ್ಕಾರ ಬಂದ ನಂತರ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದರು.

ADVERTISEMENT

‘ಮಹದೇವಪುರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಸಿಎಸ್‌ಆರ್ ಅನುದಾನ ಸೇರಿದಂತೆ ವಿವಿಧ ಅನುದಾನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಕ್ಷೇತ್ರದಲ್ಲಿರುವ 40ಕ್ಕೂ ಹೆಚ್ಚು ಕೆರೆಗಳು ಅಭಿವೃದ್ಧಿ ಹಂತದಲ್ಲಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.