ADVERTISEMENT

ನೀರು ಪೂರೈಕೆಯಲ್ಲಿ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 17:58 IST
Last Updated 4 ಫೆಬ್ರುವರಿ 2021, 17:58 IST

ಬೆಂಗಳೂರು: ಟಿ.ಕೆ. ಹಳ್ಳಿ ಮಾರ್ಗದಲ್ಲಿ ನೀರು ಸೋರಿಕೆಯಾಗುತ್ತಿದ್ದು, ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಇದೇ 5ರ ಶುಕ್ರವಾರ ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ನಗರದ ವಿವಿಧ ಪ್ರದೇಶದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಹೇಳಿದೆ.

ನಂದಿನಿ ಬಡಾವಣೆ, ಆರ್.ಆರ್. ನಗರ, ರಾಜಾಜಿನಗರ, ನಾಗರಬಾವಿ, ಯಲಹಂಕ, ಬ್ಯಾಟರಾಯನಪುರ, ಎಚ್ಆರ್‌ಸಿಆರ್, ದಾಸರಹಳ್ಳಿ, ಚಂದ್ರ ಲೇಔಟ್, ಕೆಂಗೇರಿ, ಬಾಣಸವಾಡಿ ಮತ್ತು ಉತ್ತರ ವಿಭಾಗದ ಬಹುತೇಕ ಭಾಗಗಳು, ಅಂಜನಾ ಪುರ ಮತ್ತು ಸುತ್ತಮುತ್ತಲಿನ ಪ್ರದೇಶ.

ಜಂಬೂಸವಾರಿ ದಿಣ್ಣೆ, ಕೊತ್ತನೂರು ದಿಣ್ಣೆ, ಕೋಡಿ ಚಿಕ್ಕನಹಳ್ಳಿ, ಬೊಮ್ಮನಹಳ್ಳಿ, ಕೂಡ್ಲು, ಹೊಂಗಸಂದ್ರ, ಮಂಗಮ್ಮನಪಾಳ್ಯ, ಮಾರತ್ತಹಳ್ಳಿ, ಹೂಡಿ, ಎ.ನಾರಾಯಣಪುರ, ಕೆ.ಆರ್. ಪುರ, ರಾಮಮೂರ್ತಿ ನಗರ, ವೈಟ್‌ಫೀಲ್ಡ್, ಸಿ.ವಿ.ರಾಮನ್ ನಗರ, ಹಳೆಯ ವಿಮಾನ ನಿಲ್ದಾಣ ರಸ್ತೆ, ಎಚ್ಆರ್‌ಬಿಆರ್ ಬಡಾವಣೆ, ಓಂ ಎಂಬಿಆರ್ ಬಡಾವಣೆ, ರಾಮಯ್ಯ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.