ADVERTISEMENT

ವಾಯುಭಾರ ಕುಸಿತ: ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 19:21 IST
Last Updated 27 ನವೆಂಬರ್ 2020, 19:21 IST
   

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ರಾಜ್ಯದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

‘ದಕ್ಷಿಣ ಒಳನಾಡಿನಲ್ಲಿ ಡಿ.1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನ.29ರವರೆಗೆ ಮಳೆಯಾಗಲಿದ್ದು, ನ.30 ಮತ್ತು ಡಿ.1ರಂದು ಒಣಹವೆ ನಿರೀಕ್ಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ಕರಾವಳಿಯಲ್ಲಿ ಶನಿವಾರ ಅಲ್ಲಲ್ಲಿ ಹಗುರ ಮಳೆಯಾಗಲಿದ್ದು, ನ.29ರಿಂದ ಡಿ.1ರವರೆಗೆ ಒಣಹವೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಕೆಲವೆಡೆ ಹಗುರ ಮಳೆಯಾಗುವ ಮತ್ತು ಮುಂಜಾನೆ ಮಂಜು ಬೀಳುವ ಸಾಧ್ಯತೆ ಇದೆ’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.