ಬೆಂಗಳೂರು: ವಾಟ್ಸ್ಆ್ಯಪ್ನಲ್ಲಿ ಬಂದಿದ್ದ ಸಂದೇಶ ನಂಬಿದ್ದ ಮಹಿಳೆಯೊಬ್ಬರು ₹ 10.77 ಲಕ್ಷ ಕಳೆದುಕೊಂಡಿದ್ದಾರೆ.
‘ಉಡುಗೊರೆ ಆಮಿಷವೊಡ್ಡಿದ್ದ ಅಪರಿಚಿತರು ಹಣ ಪಡೆದು ವಂಚಿಸಿದ್ದಾರೆ’ ಎಂದು ಆರೋಪಿಸಿ ಜಯನಗರದ 40 ವರ್ಷದ ಮಹಿಳೆಯೊಬ್ಬರು ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
‘ಅಪರಿಚಿತ ಸಂಖ್ಯೆಯಿಂದ ವಾಟ್ಸ್ಆ್ಯಪ್ಗೆ ಸಂದೇಶ ಕಳುಹಿಸಿದ್ದ ಆರೋಪಿ, ‘ನಿಮ್ಮ ಹೆಸರಿಗೆ ಬೆಲೆ ಬಾಳುವ ಉಡುಗೊರೆಗಳು ಬಂದಿವೆ’ ಎಂದು ಹೇಳಿದ್ದ. ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಸೋಗಿನಲ್ಲೂ ಕರೆ ಮಾಡಿ ಮಾತನಾಡಿದ ಆರೋಪಿ, ‘ಲಕ್ಷಾಂತರ ರೂಪಾಯಿ ಮೌಲ್ಯದ ಉಡುಗೊರೆ ಬಂದಿದ್ದು, ಅದನ್ನು ನಿಮ್ಮ ವಿಳಾಸಕ್ಕೆ ಕಳುಹಿಸಲು ಶುಲ್ಕ ಹಾಗೂ ಜಿಎಸ್ಟಿ ಪಾವತಿಸಬೇಕು’ ಎಂದಿದ್ದ’ ಎಂದು ಪೊಲೀಸರು ಹೇಳಿದರು.
‘ಆರೋಪಿಗಳ ಮಾತು ನಂಬಿದ್ದ ಮಹಿಳೆ, ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹ 10.77 ಲಕ್ಷ ಹಾಕಿದ್ದರು. ಅದಾದ ನಂತರ ಯಾವುದೇ ಉಡುಗೊರೆ ಬಂದಿಲ್ಲ. ಆರೋಪಿಗಳು ನಾಪತ್ತೆಯಾಗಿದ್ದಾರೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.