ADVERTISEMENT

ಕಾರು– ಬೈಕ್ ಅಪಘಾತ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 21:41 IST
Last Updated 22 ನವೆಂಬರ್ 2022, 21:41 IST

ಬೆಂಗಳೂರು: ವೈಟ್‌ಫೀಲ್ಡ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರ ನಾಗೇಶ್ (19) ಮೃತಪಟ್ಟಿದ್ದಾರೆ.

‘ಸ್ಥಳೀಯ ನಿವಾಸಿ ನಾಗೇಶ್, ಕೆಲಸ ನಿಮಿತ್ತ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತಕ್ಕೆ ಕಾರಣ ಎನ್ನಲಾದ ಕಾರು ಚಾಲಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನಾಗೇಶ್, ನೆಕ್ಕುಂದಿ–ದೊಮ್ಮಸಂದ್ರ ಬಡಾವಣೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಇದೇ ರಸ್ತೆಯಲ್ಲಿ ಹೊರಟಿದ್ದ ಚಾಲಕ, ಅತೀ ವೇಗವಾಗಿ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದ. ಇದರಿಂದಾಗಿ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದ ನಾಗೇಶ್ ಅವರಿಗೆ ತೀವ್ರ ಗಾಯವಾಗಿತ್ತು.’

ADVERTISEMENT

‘ನಾಗೇಶ್ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.