ADVERTISEMENT

ವನ್ಯಜೀವಿ ಮಂಡಳಿಗೆ ನೇಮಕ ಪ್ರಶ್ನಿಸಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 19:26 IST
Last Updated 26 ನವೆಂಬರ್ 2020, 19:26 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರನ್ನು ನೇಮಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಪ್ರಮೋದ್ ವೆಂಕಟೇಶಮೂರ್ತಿ ಅರ್ಜಿ ಸಲ್ಲಿಸಿದ್ದು, ‘ವನ್ಯಜೀವಿ ಸಂರಕ್ಷಣೆ ಕಾಯ್ದೆ ಪ್ರಕಾರ ಅಗತ್ಯ ಇರುವ ಅರ್ಹತೆಯನ್ನು ನೇಮಕಗೊಂಡಿರುವ ಸದಸ್ಯರು ಹೊಂದಿಲ್ಲ’ ಎಂದು ದೂರಿದ್ದಾರೆ.

‘ಅರಣ್ಯದಲ್ಲಿ ಮತ್ತು ಕಾಡಂಚಿನಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಸದಸ್ಯರು ಮತ್ತು ಪರಿಸರವಾದಿಗಳು, ಪರಿಸರ ವಿಜ್ಞಾನಿಗಳನ್ನು ಹೊಸ ಸದಸ್ಯ ಮಂಡಳಿ ಒಳಗೊಂಡಿಲ್ಲ’ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.