ADVERTISEMENT

ಯಡಿಯೂರಪ್ಪ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 11:24 IST
Last Updated 10 ಆಗಸ್ಟ್ 2020, 11:24 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು.

ಆಗಸ್ಟ್‌ 2ರ (ಭಾನುವಾರ) ರಾತ್ರಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೋವಿಡ್‌–19 ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ಲಕ್ಷಣಗಳು ಯಡಿಯೂರಪ್ಪ ಅವರಲ್ಲಿಕಾಣಿಸಿರಲಿಲ್ಲ. ಆದರೆ, ಕೋವಿಡ್‌ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿರುವುದರಿಂದ ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಯಡಿಯೂರಪ್ಪ ಅವರ ಕಾರು ಚಾಲಕನಿಗೆ ಹಾಗೂ ಅವರ ಅಡುಗೆ ಸಿಬ್ಬಂದಿಯೊಬ್ಬರಿಗೆ ಈಹಿಂದೆ ಕೋವಿಡ್‌ ದೃಢಪಟ್ಟಿತ್ತು. ಆಗ ಪರೀಕ್ಷೆ ಮಾಡಿಸಿದ್ದಾಗ ಮುಖ್ಯಮಂತ್ರಿಗೆ ಸೋಂಕು ದೃಢಪಟ್ಟಿರಲಿಲ್ಲ. ಮುಖ್ಯಮಂತ್ರಿ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿಅವರ ಗೃಹ ಕಚೇರಿ ಕಾವೇರಿ ಹಾಗೂ ಡಾಲರ್ಸ್ ಕಾಲೊನಿಯ 'ಧವಳಗಿರಿ' ನಿವಾಸವನ್ನು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.