ADVERTISEMENT

‘ಅಂಬೇಡ್ಕರ್, ಜಗಜೀವನರಾಂ ಇಬ್ಬರೂ ಸ್ಮರಣೀಯರು’

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 7:19 IST
Last Updated 10 ಏಪ್ರಿಲ್ 2022, 7:19 IST
ಕಾರ್ಯಕ್ರಮವನ್ನು ಸಚಿವ ಗೋವಿಂದ ಕಾರಜೋಳ ಉದ್ಘಾಟಿಸಿದರು. ಶಾಸಕ ಎಸ್‌.ಆರ್. ವಿಶ್ವನಾಥ್, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಮುಖಂಡ ಎಚ್.ಆಂಜನೇಯ, ಚಿಂತಕ ಹೂಡಿ ವೆಂಕಟೇಶ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೋಗಿಲು ವೆಂಕಟೇಶ್, ಬೆಂಗಳೂರು ಆದಿಜಾಂಬವ ಮಾದಿಗ ಮಹಾಸಭಾ ಅಧ್ಯಕ್ಷ ವೆಂಕಟೇಶಮೂರ್ತಿ ಇದ್ದರು 
ಕಾರ್ಯಕ್ರಮವನ್ನು ಸಚಿವ ಗೋವಿಂದ ಕಾರಜೋಳ ಉದ್ಘಾಟಿಸಿದರು. ಶಾಸಕ ಎಸ್‌.ಆರ್. ವಿಶ್ವನಾಥ್, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಮುಖಂಡ ಎಚ್.ಆಂಜನೇಯ, ಚಿಂತಕ ಹೂಡಿ ವೆಂಕಟೇಶ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೋಗಿಲು ವೆಂಕಟೇಶ್, ಬೆಂಗಳೂರು ಆದಿಜಾಂಬವ ಮಾದಿಗ ಮಹಾಸಭಾ ಅಧ್ಯಕ್ಷ ವೆಂಕಟೇಶಮೂರ್ತಿ ಇದ್ದರು    

ಯಲಹಂಕ: ‘ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ಪರಿಶಿಷ್ಟರಿಗೆ 10 ವರ್ಷಗಳ ಅವಧಿಗೆ ಸೀಮಿತವಾಗಿದ್ದ ಮೀಸಲಾತಿ 75 ವರ್ಷಗಳಾದರೂ ಮುಂದುವರಿಯಲು ಬಾಬು ಜಗಜೀವನರಾಂ ಪರಿಶ್ರಮ ಕಾರಣ. ಈ ಇಬ್ಬರ ಕೊಡುಗೆಯೂ ಸ್ಮರಣಿಯವಾದುದು’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.

ಸಿಂಗನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ ಅವರ 115ನೇ ಜಯಂತ್ಯುತ್ಸವ ಹಾಗೂ ಬೆಂಗಳೂರು ಆದಿಜಾಂಬವ ಮಾದಿಗ ಮಹಾಸಭಾ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ 3,300 ವಸತಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 5 ಲಕ್ಷಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇವರ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ₹2,500 ವೆಚ್ಚದಲ್ಲಿ 133 ವಸತಿ ಶಾಲೆಗಳಿಗೆ ಚಾಲನೆ ನೀಡಿದೆ’ ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ, ‘ಕಳೆದ ಬಾರಿ ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಮ್ಮದೇ ಸರ್ಕಾರ ಇದ್ದರೂ ಸದಾಶಿವ ಆಯೋಗದ ವರದಿ ಜಾರಿ ಸಾಧ್ಯವಾಗಲಿಲ್ಲ. ಬಿಜೆಪಿ ಸರ್ಕಾರವೇ ಈ ವರದಿ ಜಾರಿಗೊಳಿಸಿದರೆ ಶ್ಲಾಘಿಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.