ಬೆಂಗಳೂರು: ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಯಶವಂತಪುರ–ತಾಳಗುಪ್ಪ ನಡುವೆ ಎರಡೂ ಕಡೆಯಿಂದ ತಲಾ ಎರಡು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.
ಯಶವಂತಪುರದಿಂದ ಆಗಸ್ಟ್ 1 ಮತ್ತು 8ರಂದು ರಾತ್ರಿ 10.30ಕ್ಕೆ ರೈಲು ಹೊರಡಲಿದೆ. ಮರುದಿನ ಬೆಳಿಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ತಾಳಗುಪ್ಪದಿಂದ ಆಗಸ್ಟ್ 2 ಮತ್ತು 9ರಂದು ಬೆಳಿಗ್ಗೆ 8.15ಕ್ಕೆ ಹೊರಡಲಿದೆ. ಅದೇ ದಿನ ಸಂಜೆ 4.30ಕ್ಕೆ ಯಶವಂತಪುರ ತಲುಪಲಿದೆ.
ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ಈ ರೈಲುಗಳು ನಿಲುಗಡೆ ಹೊಂದಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.