ADVERTISEMENT

ದೇವನಹಳ್ಳಿ: ಯುವ ಜೋಡಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 12:49 IST
Last Updated 19 ಜನವರಿ 2022, 12:49 IST
ಸಾವು–ಪ್ರಾತಿನಿಧಿಕ ಚಿತ್ರ
ಸಾವು–ಪ್ರಾತಿನಿಧಿಕ ಚಿತ್ರ   

ದೇವನಹಳ್ಳಿ: 10 ದಿನಗಳ ಹಿಂದೆ ಪತಿ–ಪತ್ನಿ ಎಂದು ಹೇಳಿಕೊಂಡು ಬಾಡಿಗೆ ಮನೆ ಪಡೆದಿದ್ದ ಜೋಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರು ಜ್ಯೋತಿ (25) ಮತ್ತು ಬಸವರಾಜು (25). ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನವರು ಎಂದು ತಿಳಿದು ಬಂದಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಇವರು, ಬಾಡಿಗೆ ಮನೆಯಲ್ಲಿದ್ದ ಫ್ಯಾನ್‌ಗೆ ಒಂದೇ ಸೀರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.

ADVERTISEMENT

ಸೋಮವಾರ ಬೆಳಿಗ್ಗೆ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಗಮನಿಸಿ ನೆರೆಹೊರೆಯವರು ಮಾಲೀಕರಿಗೆ ಸುದ್ದಿ ತಿಳಿಸಿದ್ದರು.

ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.