ADVERTISEMENT

ಬೆಂಗಳೂರು: ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 16:26 IST
Last Updated 13 ಆಗಸ್ಟ್ 2024, 16:26 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಯುವತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾರ್ಜಿಲಿಂಗ್‌ ನಿವಾಸಿ ಲಿಖಿತಾ ಜಾಸ್ಮೀನ್‌(24) ಆತ್ಮಹತ್ಯೆ ಮಾಡಿಕೊಂಡವರು. ಸೋಲದೇವನಹಳ್ಳಿಯಲ್ಲಿ ನೆಲಸಿದ್ದ ಅಕ್ಕ ಕೃತಿಕಾ ಅವರ ಮನೆಗೆ ಲಿಖಿತಾ ಜಾಸ್ಮೀನ್‌ ಆಗಸ್ಟ್‌ 3ರಂದು ಬಂದಿದ್ದರು.

ADVERTISEMENT

ಲಿಖಿತಾ ಅವರು ಬಿಹಾರ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ಪರಸ್ಪರ ದೂರವಾಗಿದ್ದರು. ಇದರಿಂದ ನೊಂದಿದ್ದರು. ಅದೇ ನೋವಿನಲ್ಲಿ ತಂಗಿ ಏನಾದರೂ ಅನಾಹುತ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಅರಿತು ಬೆಂಗಳೂರಿಗೆ ಕರೆಸಿಕೊಂಡಿದ್ದರು. ಮಂಗಳವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಯಿಂದ ಆಚೆ ಬಂದಿದ್ದ ಲಿಖಿತಾ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ರೈಲ್ವೆ ಪೊಲೀಸರು ಸ್ಥಳ ಮಹಜರು ಕಾರ್ಯ ನಡೆಸಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.