ಬೆಂಗಳೂರು: ಮಾಸ್ಕ್ ಹಾಕದಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಎಎಸ್ಐ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಅಕ್ಷಯ್ ಎಂಬಾತನನ್ನು ವಿದ್ಯಾರಣ್ಯಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಸ್ಥಳೀಯ ನಿವಾಸಿ ಅಕ್ಷಯ್, ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿ ಬೈಕ್ನಲ್ಲಿ ಹೊರಟಿದ್ದ. ಅದೇ ಸಂದರ್ಭದಲ್ಲೇ ಕರ್ತವ್ಯದಲ್ಲಿದ್ದ ಎಎಸ್ಐ, ಆತನನ್ನು ತಡೆದು ಪ್ರಶ್ನಿಸಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಅಕ್ಷಯ್ ಮಾಸ್ಕ್ ಹಾಕಿರಲಿಲ್ಲ. ಅದನ್ನು ಕೇಳಿದ್ದ ಎಎಸ್ಐ, ಮಾಸ್ಕ್ ಹಾಕಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದರು. ದಂಡ ಕಟ್ಟುವಂತೆಯೂ ಸೂಚಿಸಿದ್ದರು. ಅಷ್ಟಕ್ಕೆ ಸಿಟ್ಟಾದ ಅಕ್ಷಯ್ ಹಲ್ಲೆ ಮಾಡಿದ್ದ. ರಕ್ಷಣೆಗೆ ಹೋಗಿದ್ದ ಸಿಬ್ಬಂದಿ, ಆತನನ್ನು ಹಿಡಿದುಕೊಂಡು ಬೈಕ್ ಸಮೇತ ಠಾಣೆಗೆ ಕರೆತಂದಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.