ಬೆಂಗಳೂರು: ಹಣದ ವಿಚಾರಕ್ಕಾಗಿ ಗಲಾಟೆ ನಡೆದು ಇರ್ಫಾನ್ ಎಂಬುವರನ್ನು ಕೊಲೆ ಮಾಡಲಾಗಿದ್ದು, ಈ ಸಂಬಂಧ ಅವರ ಸ್ನೇಹಿತ ನವೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ವಿಜಯನಗರ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ ಇರ್ಫಾನ್, ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆತ್ಮೀಯ ಸ್ನೇಹಿತ ಎನ್ನಲಾದ ಆರೋಪಿ ನವೀನ್ ಜೊತೆಯೇ ಹೆಚ್ಚು ಓಡಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.
‘ಇಬ್ಬರೂ ಸ್ನೇಹಿತರು ಮೊಬೈಲೊಂದನ್ನು ಮಾರಾಟ ಮಾಡಿದ್ದರು. ಅದರಿಂದ ಹಣ ಬಂದಿತ್ತು. ಅದನ್ನು ಹಂಚಿಕೊಳ್ಳುವ ವಿಚಾರವಾಗಿ ಸೋಮವಾರ ರಾತ್ರಿ ಗಲಾಟೆ ಆಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಆರೋಪಿ ನವೀನ್, ಇರ್ಫಾನ್ ಮೇಲೆ ಹಲ್ಲೆ ಮಾಡಿದ್ದ. ತೀವ್ರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದ ಇರ್ಫಾನ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.
‘ಮಾರಾಟ ಮಾಡಿದ್ದ ಮೊಬೈಲ್ ಯಾರದ್ದು ಎಂಬುದು ಗೊತ್ತಾಗಿಲ್ಲ. ನವೀನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.