ADVERTISEMENT

ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಎಎಪಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 4:46 IST
Last Updated 4 ಏಪ್ರಿಲ್ 2022, 4:46 IST
ಭಾಸ್ಕರ್‌ ರಾವ್‌
ಭಾಸ್ಕರ್‌ ರಾವ್‌   

ಬೆಂಗಳೂರು: ನಿವೃತ್ತ ಐಪಿಎಸ್‌ ಅಧಿಕಾರಿ ಬಿ. ಭಾಸ್ಕರ್‌ ರಾವ್‌ ಸೋಮವಾರ ಆಮ್‌ ಆದ್ಮಿ ಪಕ್ಷ (ಎಎಪಿ) ಸೇರಲಿದ್ದಾರೆ. 1990ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅವರು, ಸೇವೆಯಿಂದ ಈಚೆಗೆ ಸ್ವಯಂ ನಿವೃತ್ತಿ ಪಡೆದಿದ್ದಾರೆ.

ಭಾಸ್ಕರ್‌ ರಾವ್‌ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಸುದ್ದಿ ಅವರು ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ ದಿನದಿಂದಲೂ ಪ್ರಚಾರದಲ್ಲಿತ್ತು. ಎಎಪಿ, ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳ ಸೇರ್ಪಡೆ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿತ್ತು. ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಆಪ್‌ ಸೇರುತ್ತಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷವನ್ನು ಸದೃಢಗೊಳಿಸುವ ಗುರಿ ನಮ್ಮ ಮುಂದಿದೆ. ನನ್ನ ಮುಂದಿನ ಯೋಜನೆಗಳನ್ನು ಶೀಘ್ರದಲ್ಲಿ ಪ್ರಕಟಿಸುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.