ADVERTISEMENT

ತೆರೆದ ಒಳಚರಂಡಿ: ಸಂಚಾರಕ್ಕೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2013, 4:58 IST
Last Updated 14 ಡಿಸೆಂಬರ್ 2013, 4:58 IST

ಚಿಟಗುಪ್ಪಾ: ಪಟ್ಟಣದ ಬಸವರಾಜ್ ವೃತ್ತದಲ್ಲಿಯ ಕರಿಮುಲ್ಲಾ ಷಾದರ್ಗಾ ಪಕ್ಕದ ತಿರುವಿನ ರಸ್ತೆಯಲ್ಲಿಯಲ್ಲಿನ ತೆರೆದ ಒಳಚರಂಡಿ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ. ನಾಲ್ಕು ವರ್ಷಗಳ ಹಿಂದೆ ಸುಗಮ ಜನ ಸಂಚಾರಕ್ಕೆ ನಗರ ಅಭಿವೃದ್ಧಿ ಪ್ರಾಧಿಕಾರದಿಂದ ರಸ್ತೆಗಳ ಅಗಲೀಕರಣ ಕಾರ್ಯ ನಡೆದಿತ್ತು.

ವಾಹನಗಳ ಸುಗಮ ಸಂಚಾರಕ್ಕಾಗಿ ದರ್ಗಾ ಮುಂದೆ ತಿರುವಿನಲ್ಲಿ ರಸ್ತೆ ವಿಭಜಕ ಅಳವಡಿಸಲಾಗಿತ್ತು. ಆದರೆ ದರ್ಗಾ ಪಕ್ಕದಲ್ಲಿಯ ರಸ್ತೆಯಲ್ಲಿರುವ ಒಳಚರಂಡಿ ಮೇಲೆ ಸ್ಲ್ಯಾಬ್ ಹಾಕದ ಕಾರಣ ರಸ್ತೆಯಲ್ಲಿ ಸಂಚಾರ ಸ್ಥಗಿತ­ಗೊಂಡಿದೆ. ಇದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಪುರಸಭೆ ಸದಸ್ಯರಾದ ಮಲ್ಲಿಕಾರ್ಜುನ ಪಾಟೀಲ್, ಸುಭಾಷ ಕುಂಬಾರ, ಪಿಕೆಪಿಎಸ್ ಅಧ್ಯಕ್ಷ ವಿಠಲರಾವ್ ಪಟ್ಟಣಕರ್ ದೂರುತ್ತಾರೆ.

ದರ್ಗಾ ಪಕ್ಕದಲ್ಲಿಯೇ ಸರ್ಕಾರಿ ಕನ್ಯಾ ಪ್ರೌಢಶಾಲೆ ಇದ್ದು, ಶಾಲೆ ಎದುರುಗಡೆ ಚಿಲ್ಲರೆ ಅಂಗಡಿ ವ್ಯಾಪಾರಿ­ಗಳು ನಿಲ್ಲುತ್ತಾರೆ. ಇದರಿಂದ ವಿದ್ಯಾರ್ಥಿನಿಯರಿಗೆ ತೊಂದರೆಯಾಗಿದೆ. ಚರಂಡಿ ದುರಸ್ತಿ ಕೈಗೊಂಡಲ್ಲಿ ಪ್ರೌಢ­ಶಾಲೆಯ ಎದುರುಗಡೆ ಚಿಲ್ಲರೆ ಅಂಗಡಿ ವ್ಯಾಪಾರಿಗಳು ನಿಲ್ಲುವುದು ತಪ್ಪುತ್ತದೆ. ವಿದ್ಯಾರ್ಥಿನಿಯರು ಶಾಲೆ ಒಳಗಡೆ ಪ್ರವೇಶಿಸಲು ಅನುಕೂಲವಾಗುತ್ತದೆ ಎಂದು ಹೇಳುತ್ತಾರೆ. ಚರಂಡಿ ದುರಸ್ತಿ ಬಗ್ಗೆ ಪುರಸಭೆ­ಯಿಂದ ಸೂಕ್ತ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಎಂ.ಡಿ.ಯೂಸುಫ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT