ಬಸವಕಲ್ಯಾಣ (ಬೀದರ್ ಜಿಲ್ಲೆ): ಮಾಜಿ ಸಚಿವ ಬಸವರಾಜ ಪಾಟೀಲ ಅಟ್ಟೂರ್ ಹಾಗೂ ಬಿಜೆಪಿಯ ಕೆಲ ಮುಖಂಡರು ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
‘ಪಕ್ಷದಲ್ಲಿ ಅನೇಕ ಆಕಾಂಕ್ಷಿಗಳಿರುವಾಗ ಜೆಡಿಎಸ್ ತೊರೆದು ಬಂದ ಮಲ್ಲಿಕಾರ್ಜುನ ಖೂಬಾ ಅವರಿಗೆ ಟಿಕೆಟ್ ನೀಡಿದ್ದರಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಶೀಘ್ರದಲ್ಲಿ ಬೆಂಬಲಿಗರ ಸಭೆ ನಡೆಸಿ ಮುಂದಿನ ತೀರ್ಮಾನ ಪ್ರಕಟಿಸಲಾಗುವುದು' ಎಂದು ಬಸವರಾಜ ಪಾಟೀಲ ಅಟ್ಟೂರ್ ತಿಳಿಸಿದ್ದಾರೆ.
`ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸುನಿಲ ಪಾಟೀಲ, ಯುವ ಮುಖಂಡ ಲಿಂಗರಾಜ ಪಾಟೀಲ ಅಟ್ಟೂರ್, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರರಾವ್ ನಾಗದೆ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಪ್ರದೀಪಕುಮಾರ ವಾತಡೆ, ನಗರಸಭೆ ಸದಸ್ಯ ರವಿ ಕೊಳಕೂರ್ ಅವರು ಕೂಡ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇವೆ’ ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗುರುಲಿಂಗಪ್ಪ ಸೈದಾಪುರೆ, ಮಾಜಿ ಉಪಾಧ್ಯಕ್ಷ ಬಸವರಾಜ ರಾಯಗೊಳ, ಜಯದ್ರತ್ ಮಾಡ್ಜೆ, ಪೀಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಬಾಬುರಾವ್ ಪಟ್ನೆ ಅವರು ಕೂಡ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.