ಬೀದರ್: ‘ಮೂರು ತಿಂಗಳ ಅವಧಿಯಲ್ಲಿ ಮಿತಿ ಮೀರಿ ಹಣಕಾಸು ವ್ಯವಹಾರ ನಡೆಸುವ ಖಾತೆಗಳ ವಿವರ ನೀಡಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಎಚ್.ಆರ್. ಮಹಾದೇವ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಧಾನಸಭೆ ಚುನಾವಣೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.‘ಚುನಾವಣೆ ನೀತಿ ಸಂಹಿತೆ ಮುಗಿಯುವವರೆಗೆ ಎಲ್ಲ ಬ್ಯಾಂಕ್ಗಳು ಹಣಕಾಸಿನ ವ್ಯವಹಾರದ ಬಗೆಗೆ ಪ್ರತಿದಿನ ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಂಡಿತ ಹೊಸಳ್ಳಿ ಉಪಸ್ಥಿತರಿದ್ದರು.
ಮತದಾರರ ಸಹಾಯವಾಣಿ ಸ್ಥಾಪನೆ: ವಿಧಾನಸಭೆ ಚುನಾವಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಮತದಾರರ ಸಹಾಯವಾಣಿ ಹಾಗೂ ಹೆಲ್ಪ್ ಡೆಸ್ಕ್ಗಳನ್ನು ಸ್ಥಾಪಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ ತಿಳಿಸಿದರು.‘ಬಸವಕಲ್ಯಾಣ ಸಹಾಯವಾಣಿ ಮೊಬೈಲ್ ಸಂಖ್ಯೆ 9632899276, ಹುಮನಾಬಾದ್ 9632022421, ಬೀದರ್ ದಕ್ಷಿಣ 9916734776, ಬೀದರ್ 8867665484, ಭಾಲ್ಕಿ 9900143871, ಔರಾದ್ ಸಹಾಯ ವಾಣಿ ಸಂಖ್ಯೆ 8453998963, ಜಿಲ್ಲಾ ಚುನಾವಣಾಧಿಕಾರಿ ಸಂಖ್ಯೆ 1077 (ಶುಲ್ಕ ರಹಿತ) ಹಾಗೂ ಮುಖ್ಯ ಚುನಾವಣಾಧಿಕಾರಿ ಸಂಖ್ಯೆ 1950 (ಶುಲ್ಕ ರಹಿತ) ಇದೆ’ ಎಂದು ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
‘ಮತದಾರರು ಈ ಸಂಖ್ಯೆಗಳಿಗೆ ಕರೆ ಮಾಡಿ ಚುನಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು’ ಎಂದರು.‘ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾದ ಚೆಕ್ ಪೋಸ್ಟ್ಗಳನ್ನು ಪರಿಶೀಲಿಸ ಲಾಗಿದೆ. ಚೆಕ್ ಪೋಸ್ಟ್ಗಳನ್ನು ಇನ್ನೂ ಬಲಪಡಿಸಲು ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗುವುದು’ ಎಂದು ಹೇಳಿದರು.‘ಜಿಲ್ಲೆಯಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಿಸುವ ಕಾರ್ಯ ನಡೆದಿದೆ. ಈಗಾಗಲೇ 78,000 ಜನರಿಗೆ ಗುರುತಿನ ಚೀಟಿ ವಿತರಿಸಲಾಗಿದೆ. 35,000 ಜನರಿಗೆ ಎರಡು ದಿನ ಗಳೊಳಗೆ ವಿತರಿಸಲಾಗುವುದು’ ಎಂದು ತಿಳಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಇದ್ದರು.
ಅಕ್ರಮ ಮದ್ಯ ಮಾರಾಟ ನಿಯಂತ್ರಣ ಕೊಠಡಿ ಸ್ಥಾಪನೆ: ವಿಧಾನಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ನಿಯಂತ್ರಣ ಕೊಠಡಿ ಸ್ಥಾಪನೆ ಮಾಡಲಾಗಿದೆ.
ನಿಯಂತ್ರಣ ಕೊಠಡಿಗಳ ವಿವರ: ಬೀದರ್ ಅಬಕಾರಿ ಉಪ ಆಯುಕ್ತರ ಕಚೇರಿ: 08482-221056, 9449597159, ಬೀದರ್ ವಿಭಾಗದ ಅಬಕಾರಿ ಉಪ ಅಧೀಕ್ಷಕ:9449597162, ಬೀದರ್ ಅಬಕಾರಿ ನಿರೀಕ್ಷಕ:9449597163, ಬೀದರ್ ವಲಯ ಅಬಕಾರಿ ನಿರೀಕ್ಷಕ: 08482-221747, 9448584957, ಹುಮನಾಬಾದ್ ವಲಯ ಅಬಕಾರಿ ನಿರೀಕ್ಷಕ:08483-271613, 9741299060, ಬಸವಕಲ್ಯಾಣ ವಲಯ ಅಬಕಾರಿ ನಿರೀಕ್ಷಕ: 08481-251820, 9902728786, ಭಾಲ್ಕಿ ವಲಯ ಅಬಕಾರಿ ನಿರೀಕ್ಷಕ:08484-261883, 9448035244, ಔರಾದ್ ವಲಯ ಅಬಕಾರಿ ನಿರೀಕ್ಷಕ: 08485-280656, 7795577449. ಚುನಾವಣೆ ಸಮಯದಲ್ಲಿ ಅಕ್ರಮ ಮದ್ಯ, ಕಳ್ಳಬಟ್ಟಿ ತಯಾರಿಕೆ, ಸಂಗ್ರಹಣೆ, ಸಾಗಣೆ, ಮಾರಾಟ ಅಥವಾ ವಿತರಣೆ ಕಂಡು ಬಂದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ತೆರೆಯಲಾದ ಅಬಕಾರಿ ಇಲಾಖೆಯ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕು.ಮಾಹಿತಿ ನೀಡಿದ ವ್ಯಕ್ತಿಯ ಹೆಸರು ಮತ್ತು ವಿಳಾಸವನ್ನು ಗೋಪ್ಯವಾಗಿ ಇಡಲಾಗುವುದು ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯುಧಗಳ ನಿಷೇಧ
ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಲೈಸನ್ಸ್ದಾರರ ಆಯುಧಗಳ ಸಾಗಣೆ ಹಾಗೂ ಪ್ರದರ್ಶನ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಡಾ.ಎಚ್.ಆರ್.ಮಹಾದೇವ ಆದೇಶ ಹೊರಡಿಸಿದ್ದಾರೆ.
ಆಯುಧ ಕಾಯ್ದೆ 1959ರ ಅಡಿ ಆಯುಧ(ಫೈರ್ ಆರ್ಮ್) ಹೊಂದಲು ಜಿಲ್ಲೆಯಾದ್ಯಂತ ಅನುಮತಿ ಪಡೆದ ಲೈಸನ್ಸ್ದಾರರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಆಯುಧಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಜಮಾ ಮಾಡಬೇಕು ಎಂದು ತಿಳಿಸಿದ್ದಾರೆ.
ಮುದ್ರಣ ಸಂಸ್ಥೆಗಳ ಸಭೆ ಇಂದು
ಬೀದರ್: ಚುನಾವಣೆ ನೀತಿ ಸಂಹಿತೆ ಪಾಲಿಸುವ ಸಂಬಂಧ ಏ.3ರಂದು ಸಂಜೆ 4ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಮುದ್ರಣ ಸಂಸ್ಥೆಗಳ ಮಾಲೀಕರ ಸಭೆ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.