ADVERTISEMENT

ಮಹಾವೀರರ ಪಲ್ಲಕ್ಕಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 8:30 IST
Last Updated 8 ಅಕ್ಟೋಬರ್ 2012, 8:30 IST

ಬೀದರ್: `ದಶಲಕ್ಷಣ~ದ ಪ್ರಯುಕ್ತ ನಗರದಲ್ಲಿ ಭಾನುವಾರ ಶ್ರದ್ಧೆ, ಭಕ್ತಿಯೊಂದಿಗೆ ಭಗವಾನ ಮಹಾವೀರರ ಭಾವಚಿತ್ರದ ಮೆರವಣಿಗೆ ನಡೆಯಿತು.ನಗರದ ಜೈನ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಕಳಸ ಹೊತ್ತ ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದರು.

ಮೆರವಣಿಗೆಯ ಬಳಿಕ ಜೈನ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಪ್ರಮುಖರಾದ ಜೀನೇಂದ್ರ ಟಿಕ್ಕೆ, ವಿಜಯಕುಮಾರ್ ಜೈನ್, ಅಜೀತ್‌ಮಣಿ, ನೇಮಿನಾಥ ಬೆಳಕಿರೆ ಮತ್ತಿತರರು ಉಪಸ್ಥಿತರಿದ್ದರು.

ದಶಲಕ್ಷಣದ ನಿಮಿತ್ತ ಜೈನ ಮಂದಿರದಲ್ಲಿ ಕಳೆದ ಹತ್ತು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಸಮಾರೋಪದ ಅಂಗವಾಗಿ ಪಲ್ಲಕ್ಕಿ ಮೆರವಣಿಗೆ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.