ಬೀದರ್: ಕರ್ನಾಟಕ ಮಿನಿ ಫುಟ್ಬಾಲ್ ಸಂಸ್ಥೆಯ ವತಿಯಿಂದ ರಾಷ್ಟ್ರಮಟ್ಟದ ಫುಟ್ಬಾಲ್ ಟೂರ್ನಿ ಅ. 12 ರಿಂದ 14ರ ವರೆಗೆ ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.
ದೇಶದ ವಿವಿಧೆಡೆಯಿಂದ 40 ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. 12ರಂದು ಬೆಳಿಗ್ಗೆ 10.30ಕ್ಕೆಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟೂರ್ನಿಗೆ ಚಾಲನೆ ನೀಡುವರು. ಸಂಸದ ಭಗವಂತ ಖೂಬಾ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂ ಖಾನ್, ಶಾಸಕರಾದ ಮಲ್ಲಿಕಾರ್ಜುನ ಖೂಬಾ, ಪ್ರಭು ಚವಾಣ್, ಅಂತರರಾಷ್ಟ್ರೀಯ ಕ್ರೀಡಾಪಟುಗಳಾದ ಚಂದ್ರಶೇಖರ, ಬಾಲಾಜಿ ನರಸಿಂಹ, ಬಲಬೀರ್ಸಿಂಗ್, ಅಬ್ದುಲ್ ಖದೀರ್ ಅತಿಥಿಗಳಾಗಿ ಭಾಗವಹಿಸುವರು.
14ರಂದು ನಡೆಯಲಿರುವ ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಚಲನಚಿತ್ರ ತಾರೆ ಹೇಮಾಮಾಲಿನಿ ಬರಲಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.