ADVERTISEMENT

ವಿವಿಧೆಡೆ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2012, 9:20 IST
Last Updated 21 ಜುಲೈ 2012, 9:20 IST
ವಿವಿಧೆಡೆ ಮುಂದುವರಿದ ಮಳೆ
ವಿವಿಧೆಡೆ ಮುಂದುವರಿದ ಮಳೆ   

ಬೀದರ್: ನಗರ ಸೇರಿದಂತೆ ಜಿಲ್ಲೆಯ ವಿವಿಧಡೆ ಶುಕ್ರವಾರವು ವರುಣನ ಕೃಪೆ ಮುಂದುವರೆದಿದ್ದು, ಸಾಧಾರಣದಿಂದ ಧಾರಾಕಾರ ಮಳೆಯಾಗಿದೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಈ ಮಳೆ ಪೂರಕವಾಗಿರುವುದರಿಂದ ಕೃಷಿಕನ ಮೊಗದಲ್ಲಿಯೂ ಸಮಾಧಾನ ಮೂಡಿದೆ.

ಶುಕ್ರವಾರ ದಿನವಿಡಿ ಆಗಸದಲ್ಲಿ ಮೊಡಕವಿದ ವಾತಾವರಣ ಇದ್ದು, ಮಧ್ಯಾಹ್ನ ಜಿನುಗುನಿಂದ ಕೂಡಿದ ಸಾಧಾರಣ ಮಳೆ ಸುರಿದರೆ, ಸಂಜೆ ಕೆಲಹೊತ್ತು ಧಾರಾಕಾರ ಮಳೆ ಸುರಿಯಿತು. ಬಸವಕಲ್ಯಾಣ, ಔರಾದ್ ಹಾಗೂ ಭಾಲ್ಕಿ ತಾಲ್ಲೂಕುಗಳಲ್ಲಿಯೂ ಉತ್ತಮ ಮಳೆಯಾದ ವರದಿ ಇದ್ದು, ಹುಮನಾಬಾದ್ ತಾಲ್ಲೂಕಿನ ಮಳೆ ಪ್ರಮಾಣ ಕಡಿಮೆ ಇತ್ತು. ಬಿತ್ತನೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಕಬ್ಬು, ಉದ್ದು, ಹೆಸರು. ಸೋಯಾಬಿನ್ ಬೆಳೆಗೆ ಈ  ಮಳೆ ಪೂರಕವಾಗಿದೆ ಎಂಬ ಅಭಿಪ್ರಾಯ ರೈತರದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.