ADVERTISEMENT

ಸಿದ್ಧೇಶ್ವರ ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 5:20 IST
Last Updated 27 ಮಾರ್ಚ್ 2018, 5:20 IST
ಭಾಲ್ಕಿ ತಾಲ್ಲೂಕಿನ ಸಿದ್ಧೇಶ್ವರ ಗ್ರಾಮದಲ್ಲಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ
ಭಾಲ್ಕಿ ತಾಲ್ಲೂಕಿನ ಸಿದ್ಧೇಶ್ವರ ಗ್ರಾಮದಲ್ಲಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ   

ಭಾಲ್ಕಿ: ತಾಲ್ಲೂಕಿನ ಸಿದ್ಧೇಶ್ವರ ಗ್ರಾಮದಲ್ಲಿ ದಲಿತ ಮತ್ತು ಲಿಂಗಾಯತರ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಎಂಟು ಜನ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಸದ್ಯ ಉದ್ವಿಘ್ನ ಸ್ಥಿತಿ ಉಂಟಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

‘6 ಜನ ಸಿಪಿಐ, 3 ಪಿಎಸ್‍ಐ, 40 ಜನ ಪೊಲೀಸ್ ಸಿಬ್ಬಂದಿ, 2 ಡಿಆರ್ ತುಕ್ಕಡಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿವೆ. ಈ ವಿಷಯ ಸಂಬಂಧ ಗಾಯಗೊಂಡವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.