ಬೀದರ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ 9ನೇ ರ್ಯಾಂಕ್ ಗಳಿಸಿದ ನಗರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿ ಕಾರ್ತಿಕ ರೆಡ್ಡಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ₹ 11 ಸಾವಿರ ನಗದು ಬಹುಮಾನ ನೀಡಿದ್ದಾರೆ.
ನಗರದ ವಿದ್ಯಾರ್ಥಿಯ ನಿವಾಸಕ್ಕೆ ಭೇಟಿ ನೀಡಿದ ಅವರು ಶಾಲು ಹೊದಿಸಿ ಸನ್ಮಾನಿಸಿ, ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಕಾರ್ತಿಕ ರೆಡ್ಡಿ ನೀಟ್ನಲ್ಲಿ 9ನೇ ರ್ಯಾಂಕ್ ಪಡೆದು ಇಡೀ ದೇಶವೇ ಬೀದರ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.