ಬೀದರ್: ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತವು ಮುಖ್ಯಮಂತ್ರಿ ಕೋವಿಡ್– 19 ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದೆ.
ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಚೆಕ್ ಹಸ್ತಾಂತರಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ ಮನೋಹರ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ, ನಿರ್ದೇಶಕರಾದ ಮಹಾದೇವ ಸ್ವಾಮಿ, ಭಾರತಿ ಮಲ್ಲಿಕಾರ್ಜುನ, ಗಾಯತ್ರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.