ADVERTISEMENT

ಸಿಡಿಲು ಬಡಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 10:57 IST
Last Updated 3 ಜೂನ್ 2020, 10:57 IST
ಶಾಸಕ ರಾಜಶೇಖರ ಪಾಟೀಲ ಅವರು ಸಿಡಿಲು ಬಡಿದು ಗಾಯಗೊಂಡ ವ್ಯಕ್ತಿಯ ಆರೋಗ್ಯ ವಿಚಾರಿಸಿದರು
ಶಾಸಕ ರಾಜಶೇಖರ ಪಾಟೀಲ ಅವರು ಸಿಡಿಲು ಬಡಿದು ಗಾಯಗೊಂಡ ವ್ಯಕ್ತಿಯ ಆರೋಗ್ಯ ವಿಚಾರಿಸಿದರು   

ಚಿಟಗುಪ್ಪ: ಪಟ್ಟಣದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಟ್ಟಣದ ಪನ್ನಮಲ್ಲ ಚೌಕ್ ಹತ್ತಿರ ನಿಂತಿದ್ದಾಗ ಪಟ್ಟಣದ ನಿವಾಸಿ ನಿಜಾಮೊದ್ದೀನ್ ನಜಮೊದ್ದೀನ್ (45) ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಗಾಯಗೊಂಡ ಪಟ್ಟಣದ ನಿವಾಸಿ ವಾಜಿದ್ ಬಂದೆಲಿಸಾಬ್ (28) ಅವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ಗಾಯಾಳು ಇಲ್ಲಿಯ ನಿವಾಸಿ ಸಂಜು ಬಾಬುರಾವ್ (38) ಅವರನ್ನು ಬೀದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಶಾಸಕ ರಾಜಶೇಖರ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಕೊಡಿಸುವುದಾಗಿ ಭರವಸೆ ನೀಡಿದರು.

ಪುರಸಭೆ ಸದಸ್ಯ ದಿಲೀಪ ಕುಮಾರ್ ಬಗ್ದಲಕರ್ ಹಾಗೂ ಇತರರು ಇದ್ದರು. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.