ಬೀದರ್: ಕೋವಿಡ್ನಿಂದ ಮೃತಪಟ್ಟ ಹಿರಿಯ ಪತ್ರಿಕಾ ಛಾಯಾಗ್ರಾಹಕ ಮಾರುತಿರಾವ್ ತಾಂದಳೆ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ₹ 5 ಲಕ್ಷ ಪರಿಹಾರ ಒದಗಿಸಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಕೋವಿಡ್ನಿಂದ ಮೃತಪಟ್ಟ ಪತ್ರಕರ್ತರಿಗೆ ₹ 5 ಲಕ್ಷ ಪರಿಹಾರ ಕೊಡುವುದಾಗಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರಿಹಾರ ನಿಧಿಯಿಂದ ಕಳೆದ ವಾರ ತಾಂದಳೆ ಅವರ ಪತ್ನಿ ವಿದ್ಯಾವತಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗಿದೆ ಎಂದು ತಾಂದಳೆ ಪರಿವಾರದ ಹೇಳಿಕೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.