ADVERTISEMENT

ಜೆಡಿಎಸ್‌ ರಾಜ್ಯ ಮಟ್ಟದ ಯುವ ಸಮಾವೇಶ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 9:14 IST
Last Updated 12 ಜನವರಿ 2018, 9:14 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಬೀದರ್: ‘ಚಿತ್ರದುರ್ಗ ಜಿಲ್ಲೆ ಹಿರಿಯೂರಲ್ಲಿ ಫೆ.18 ಅಥವಾ 25 ರಂದು ರಾಜ್ಯ ಮಟ್ಟದ ಯುವ ಸಮಾವೇಶ ಆಯೋಜಿಸಿ ಐದು ಲಕ್ಷ ಯುವ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಲಾಗುವುದು’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ, ಶಾಸಕ ಮಧು ಬಂಗಾರಪ್ಪ ಹೇಳಿದರು.

‘ರಾಜ್ಯಮಟ್ಟದ ಸಮಾವೇಶಕ್ಕೂ ಮೊದಲು ಜಿಲ್ಲಾ ಮಟ್ಟದ ಸಮಾವೇಶಗಳನ್ನು ನಡೆಸಲಾಗುವುದು. ಯುವಕರಿಂದ ರಾಜಕೀಯದಲ್ಲಿ ಬದಲಾವಣೆ ತರಲು ಸಾಧ್ಯ. ರಾಜ್ಯದಲ್ಲಿ 48 ಲಕ್ಷ ಯುವಕರಿದ್ದಾರೆ. ಜೆಡಿಎಸ್‌ ಯುವ ಶಕ್ತಿಯನ್ನು ಒಗ್ಗೂಡಿಸಲಿದೆ’ ಎಂದು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ವಹಿಸಿಕೊಂಡಿರುವ ಅನಂತಕುಮಾರ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಸಂಸತ್ತಿನಲ್ಲಿ ಕ್ಷಮೆಯಾಚಿಸಿದಾಗಲೂ ಅವರ ದೈಹಿಕ ಭಾಷೆ ಸರಿ ಇರಲಿಲ್ಲ.

ADVERTISEMENT

ಇಂಥವರಿಗೆ ಪ್ರಧಾನಿ  ನರೇಂದ್ರ ಮೋದಿ ಸಂಸತ್ತಿನ ಒಳಗೆ ಬಿಡಬಾರದು’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಅವರು ಆಗ್ರಹಿಸಿದರು. ‘ಮುಸ್ಲಿಮರ ಮತ ಬೇಕಾಗಿಲ್ಲ ಎಂದು ಹೇಳಿಕೆ ನೀಡುತ್ತಿರುವ ಅನಂತಕುಮಾರ ಅವರಿಗೆ ಮಾನ, ಮರ್ಯಾದೆ ಇದೆಯೇ’ ಎಂದು ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಪ್ರಶ್ನಿಸಿದರು.

‘ಸಂವಿಧಾನದಲ್ಲಿ ಎಲ್ಲ ಜಾತಿ, ಸಮುದಾಯದವರಿಗೂ ಸಮಾನತೆ ಕಲ್ಪಿಸಲಾಗಿದೆ. ಆದರೆ, ಇಂದು ಜಾತಿಯ ಹೆಸರಿನಲ್ಲೇ ರಾಜಕೀಯ ನಡೆದಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.