ADVERTISEMENT

ರಸ್ತೆ ಡಾಂಬರೀಕರಣಗೊಳಿಸಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 9:03 IST
Last Updated 18 ಜನವರಿ 2018, 9:03 IST
ಬಸವಕಲ್ಯಾಣ ತಾಲ್ಲೂಕಿನ ಕಾದೆಪುರದಿಂದ ಗೋರಟಾ ಗ್ರಾಮಕ್ಕೆ ಹೋಗುವ ರಸ್ತೆ
ಬಸವಕಲ್ಯಾಣ ತಾಲ್ಲೂಕಿನ ಕಾದೆಪುರದಿಂದ ಗೋರಟಾ ಗ್ರಾಮಕ್ಕೆ ಹೋಗುವ ರಸ್ತೆ   

ಬಸವಕಲ್ಯಾಣ: ತಾಲ್ಲೂಕಿನ ಕಾದೆಪುರದಿಂದ ಗೋರಟಾ ಗ್ರಾಮಕ್ಕೆ ಹೋಗುವ ರಸ್ತೆಯನ್ನು ಡಾಂಬರೀಕರಣಗೊಳಿಸಬೇಕು.

ಹುಮನಾಬಾದ್ ತಾಲ್ಲೂಕಿನ ಘಾಟಬೋರಾಳಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಹುಲಸೂರನಿಂದ ಹುಮನಾಬಾದ್ ಗೆ ಹೋಗಲು ಅನುಕೂಲಕರವಾಗಿದೆ. ಸುತ್ತಲಿನ ಗ್ರಾಮದ ಜನರಿಗೆ ಬಸವಕಲ್ಯಾಣದಿಂದ ಹುಮನಾಬಾದ್ ಗೆ ಹೋಗಲು ಸಾಕಷ್ಟು ದೂರ ಕ್ರಮಿಸಬೇಕಾಗುತ್ತದೆ. ರಸ್ತೆ ಡಾಂಬರೀಕರಣ ಮಾಡಿದರೆ ಹತ್ತಾರು ಕಿ.ಮೀ ನಷ್ಟು ಸುತ್ತಿ ಬಳಸಿ ಹೋಗುವುದು ತಪ್ಪುತ್ತದೆ.

ರಸ್ತೆಯ ಡಾಂಬರೀಕರಣಕ್ಕಾಗಿ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಇದುವರೆಗೆ ಕ್ರಮ ಕೈಗೊಂಡಿಲ್ಲ. ಇನ್ನು ಮುಂದಾದರೂ ಸಂಬಂಧಪಟ್ಟವರು ಗಮನಹರಿಸಬೇಕು.
ವೀರೇಶ ಧನ್ನೂರೆ, ಗ್ರಾಮಸ್ಥ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.