ಬೀದರ್: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ನಗರದ 107 ಹೋಟೆಲ್ಗಳ ಮೇಲೆ ದಾಳಿ ನಡೆಸಿ ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದ ಹೋಟೆಲ್ಗಳ ಮಾಲೀಕರಿಗೆ ದಂಡ ವಿಧಿಸಿದರು.
ನಗರದ ವಿವಿಧೆಡೆಯ ಹೋಟೆಲ್, ರೆಸ್ಟೊರೆಂಟ್, ಬಾರ್ ಆ್ಯಂಡ್ ರೆಸ್ಟೊರೆಂಟ್ ಹಾಗೂ ಬೀದಿ ಬದಿಯ ಆಹಾರ ಮಾರಾಟ ಮಳಿಗೆಗಳ ಮೇಲೆ ದಾಳಿ ಮಾಡಿ ಒಟ್ಟು ₹ 93,900 ದಂಡ ವಸೂಲಿ ಮಾಡಿದರು. ದಾಳಿ ವೇಳೆ ಗುಣಮಟ್ಟದ ಬಗೆಗೆ ಅನುಮಾನ ಬಂದ ಕಾರಣ 6 ಮಾದರಿಯ ಆಹಾರ ಪದಾರ್ಥಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಯಿತು.
ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ. ಶಿವಶಂಕರ ಬಿ. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಎಂಜಿನಿಯರ್ ರವೀಂದ್ರ ಕೆ., ಆರೋಗ್ಯ ಅಧಿಕಾರಿ ಗಿರೀಶಕುಮಾರ, ಎಂ.ಎ. ಹಫೀಜ್, ಸುಭಾಷ, ಅಶೋಕ ದಫೇದಾರ್ ಕಾರ್ಯಾಚರಣೆ ನಡೆಸಿದೆರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.