ADVERTISEMENT

ಬೀದರ್‌ನಲ್ಲಿ ಯುವಕರಿಬ್ಬರ ಕೊಲೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 11:18 IST
Last Updated 2 ಫೆಬ್ರುವರಿ 2018, 11:18 IST

ಬೀದರ್‌: ನಗರದಲ್ಲಿ ಶುಕ್ರವಾರ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಯುವಕರ ಕೊಲೆ ಮಾಡಲಾಗಿದೆ. 

ನೌಬಾದ್‌ನ ಎಲ್ಲಾಲಿಂಗ ಕಾಲೊನಿಯಲ್ಲಿ ಶುಕ್ರವಾರ ಬೆಳಗಿನ ಜಾವ ಸಂಜಯ ಮಾಳಗೆ(26) ಎನ್ನುವನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸಂಜಯನ ತಾಯಿ ಕಮಲಮ್ಮ  ಅವರು ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ  ಓಲ್ಡ್‌ಸಿಟಿಯ  ಚಿತ್ರಲೇಖಾ ಚಿತ್ರಮಂದಿರದ ಬಳಿ  ಹಣದ ವ್ಯವಹಾರದ ವಿಷಯವಾಗಿ  ಯುವಕರಿಬ್ಬರು ಪರಸ್ಪರ ಹೊಡೆದಾಡಿದ್ದಾರೆ. ಆವೇಶದಲ್ಲಿ ಇಬ್ರಾಹಿಂ, ಇಮ್ರಾನ್‌ಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ಡಿವೈಎಸ್‌ಪಿ ಎಸ್‌.ವೈ.ಹುಣಶಿಕಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.