ಬಸವಕಲ್ಯಾಣ: ಇಲ್ಲಿನ ಆಹಾರ ಇಲಾಖೆ ಅಧಿಕಾರಿಗಳು ಎರಡು ಕಡೆ ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ 56 ಟನ್ ಪಡಿತರ ಅಕ್ಕಿಯನ್ನು ಈಚೆಗೆ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ₹16.86 ಲಕ್ಷ ಎಂದು ಅಂದಾಜಿಸಲಾಗಿದೆ.
ಇಲ್ಲಿಗೆ ಸಮೀಪದ 65ನೇ ರಾಷ್ಟ್ರೀಯ ಹೆದ್ದಾರಿಯಿಂದ ಗುಜರಾತ್ಗೆ ಸಾಗಿಸುತ್ತಿದ್ದ ₹9 ಲಕ್ಷ ಮೌಲ್ಯದ 30 ಟನ್ ಅಕ್ಕಿ ತುಂಬಿದ ಲಾರಿಯನ್ನು ಗುರುದೀಪ ದಾಬಾ ಸಮೀಪ ಜಪ್ತಿ ಮಾಡಿಕೊಳ್ಳಲಾಗಿದೆ. ಅದೇ ದಿನ ಇದೇ ಹೆದ್ದಾರಿಯಿಂದ ಗುಜರಾತ್ಗೆ ಸಾಗಿಸುತ್ತಿದ್ದ ₹7.86 ಲಕ್ಷ ಮೌಲ್ಯದ 26 ಟನ್ ಅಕ್ಕಿಯನ್ನು ತಡೋಳಾ ಹತ್ತಿರ ಜಪ್ತಿ ಮಾಡಿಕೊಳ್ಳಲಾಗಿದೆ.
ತಹಶೀಲ್ದಾರ್ ಸಾವಿತ್ರಿ ಸಲಗರ ಹಾಗೂ ಆಹಾರ ನಿರೀಕ್ಷಕರಾದ ರಾಮರತನ್ ದೇಗಲೆ ಮತ್ತು ನೀಲಮ್ಮ ಗಾಯಕವಾಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಅಕ್ಕಿ ಜಪ್ತಿ ಮಾಡಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.