ಭಾಲ್ಕಿ: ‘ಪ್ರತಿಯೊಬ್ಬರೂ ಲಸಿಕೆ ಪಡೆದು ರಾಷ್ಟ್ರವನ್ನು ಕೊರೊನಾ ಮುಕ್ತವಾಗಿಸಬೇಕಾಗಿದೆ’ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೂರ್ಯಕಾಂತ ಪಾಟೀಲ ಹೇಳಿದರು.
ತಾಲ್ಲೂಕಿನ ಕುರುಬಖೇಳಗಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದರು.
ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಮಾತನಾಡಿ, ‘ಜಿಲ್ಲಾಧಿಕಾರಿ ಅವರು ತಾಲ್ಲೂಕಿಗೆ 5 ಸಾವಿರ ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದಾರೆ. ನಾವು ಪ್ರತಿ ಗ್ರಾ.ಪಂ.ಗೆ ಕನಿಷ್ಠ 100 ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದೇವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಲಸಿಕೆ ಹಾಕಿಸಿದ ಒಟ್ಟು 3 ಗ್ರಾ.ಪಂ.ಗಳಿಗೆ ತಲಾ ₹4 ಸಾವಿರ, ₹3 ಸಾವಿರ, ₹2 ಸಾವಿರ ಬಹುಮಾನ ಮತ್ತು ಅಭಿನಂದನಾ ಪ್ರಮಾಣ ಪತ್ರ ನೀಡಲಾಗುವುದು’ ಎಂದು ತಿಳಿಸಿದರು.
ತಾಲ್ಲೂಕಿನಲ್ಲಿ ಒಂದೇ ದಿನ ಒಟ್ಟು 7,903 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.
ಡಾವರಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪ್ರವೀಣ ಕುರುಬಖೇಳಗಿ, ಪಿಡಿಒ ಬಸವರಾಜ, ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ, ಆರೋಗ್ಯ ಇಲಾಖೆಯ ಸುಮಿತಾ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.