ADVERTISEMENT

ಜೆಇಇ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 13:01 IST
Last Updated 3 ಜೂನ್ 2025, 13:01 IST
ನೀಲಭ್ ದ್ವಿವೇದಿ
ನೀಲಭ್ ದ್ವಿವೇದಿ   

ಮಾಮನಕೇರಿ(ಜನವಾಡ): ಬೀದರ್ ತಾಲ್ಲೂಕಿನ ಮಾಮನಕೇರಿ ಸಮೀಪದ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ನೀಲಭ್ ದ್ವಿವೇದಿ ರಾಜೇಶಕುಮಾರ ದುಬೆ ರಾಷ್ಟ್ರಮಟ್ಟದಲ್ಲಿ 5,527ನೇ ರ‍್ಯಾಂಕ್‌ ಗಳಿಸಿ ಗಮನ ಸೆಳೆದಿದ್ದಾರೆ. ಪರಿಶಿಷ್ಟ ಪಂಗಡ ವಿಭಾಗದಲ್ಲಿ ಮಲ್ಲಮ್ಮ ಅಶೋಕ 1,729, ರಿತೇಶ್ ಪಂಡಿತ 1,860 ಹಾಗೂ ಪರಿಶಿಷ್ಟ ಜಾತಿ ವಿಭಾಗದಲ್ಲಿ ಜಯಪ್ರಕಾಶ ನಾಗೇಂದ್ರ 3,333ನೇ ರ‍್ಯಾಂಕ್‌ ಗಳಿಸಿದ್ದಾರೆ. 

ವಿದ್ಯಾರ್ಥಿಗಳ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಹಾಗೂ ನಿರ್ದೇಶಕ ಮುನೇಶ್ವರ ಲಾಖಾ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.