ADVERTISEMENT

ಸಚಿವ ಪ್ರಭು ಚವಾಣ್‌ರಿಂದ ನಟ ಪುನೀತ್‍ಗೆ ಅವಮಾನ: ಅರವಿಂದಕುಮಾರ ಅರಳಿ ಆರೋಪ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 14:46 IST
Last Updated 2 ನವೆಂಬರ್ 2021, 14:46 IST
ಅರವಿಂದಕುಮಾರ ಅರಳಿ
ಅರವಿಂದಕುಮಾರ ಅರಳಿ   

ಬೀದರ್: ನಟ ಪುನೀತ್ ರಾಜಕುಮಾರ್ ನಿಧನದಿಂದ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದ್ದಾಗ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಜಿಲ್ಲೆಯ ಚೊಂಡಿಮುಖೇಡ್ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿ, ಸರ್ಕಾರ ಹಾಗೂ ರಾಜ್ಯದ ಜನ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಪವರ್ ಸ್ಟಾರ್‌ಗೆ ಅವಮಾನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆರೋಪಿಸಿದ್ದಾರೆ.

ಒಂದೆಡೆ ಸರ್ಕಾರವೇ ಪುನೀತ್ ಅವರಿಗೆ ಸಕಲ ಸರ್ಕಾರಿ ಗೌರವ ನೀಡಿದ್ದರೆ, ಮತ್ತೊಂದೆಡೆ ಸಚಿವರು ನಡೆದುಕೊಂಡ ರೀತಿ ದುಃಖ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಸಚಿವರು ಮಹಾರಾಷ್ಟ್ರದ ಸಂಬಂಧ ಹೊಂದಿದ್ದಾರೆ. ಅವರಿಗೂ ರಾಜ್ಯದ ನೆಲ, ಜಲ, ಭಾಷೆ ಹಾಗೂ ಜನರ ಗೌರವಕ್ಕೂ ಸಂಬಂಧ ಇಲ್ಲದಂತೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ.

ADVERTISEMENT

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ ಅವರು ಸಚಿವರಿಗೆ ಸಹಕರಿಸಿ ಹೆಜ್ಜೆ ಹಾಕಿದ್ದು ವಿಪರ್ಯಾಸ. ಮುಖ್ಯಮಂತ್ರಿ ಅವರು ಚವಾಣ್ ಅವರನ್ನು ಸಂಪುಟದಿಂದ ಕೈಬಿಟ್ಟು ರಾಜ್ಯ ಸರ್ಕಾರದ ಗೌರವ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.