ADVERTISEMENT

ವಾಯು ಮಾಲಿನ್ಯ ನಿಯಂತ್ರಣಾಧಿಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 20:18 IST
Last Updated 5 ಫೆಬ್ರುವರಿ 2019, 20:18 IST
   

ಬೀದರ್: ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಸುಗಂಧ ಅವರು ಹತ್ತು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಬೇಮಳಖೇಡಾದ ಸುರೇಶ ಬಳಿ ಬೇಕರಿ ಪ್ರಾರಂಭಿಸಲು ಅಗತ್ಯವಿರುವ ಎನ್ ಒಸಿ ನೀಡಲು 24 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು.

ಆರಂಭದ ಕಂತು ಹತ್ತು ಸಾವಿರ ರೂಪಾಯಿ ಪಡೆತುವಾಗ ಎಸಿಬಿ ಬಲೆಗೆ ಬಿದ್ದರು. ಎಸಿಬಿ ಡಿವೈಎಸ್ಪಿ ಬಿ.ಬಿ.ಪಟೇಲ್ ನೇತ್ರತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.