ADVERTISEMENT

ಬಸವಕಲ್ಯಾಣ: ಯುವತಿ ಜತೆ ಅಸಭ್ಯ ವರ್ತನೆ, ಆರೋಪ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 4:55 IST
Last Updated 1 ಫೆಬ್ರುವರಿ 2021, 4:55 IST

ಬಸವಕಲ್ಯಾಣ: ಹುಲಸೂರ ತಾಲ್ಲೂಕಿನ ಗಡಿಗೌಡಗಾಂವದಲ್ಲಿ ಧಾರ್ಮಿಕ ಮುಖಂಡರೊಬ್ಬರು ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಸುದ್ದಿ ಹರಡಿದ್ದರಿಂದ ಗ್ರಾಮದಲ್ಲಿ ಭಾನುವಾರ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು.

ಇದರ ಬಗ್ಗೆ ಗ್ರಾಮದಲ್ಲಿ ಸಭೆ ನಡೆಯಿತು. ದುರ್ವರ್ತನೆ ನಡೆಸಿರುವವರು ಊರಲ್ಲಿ ಇರಬಾರದು ಎಂಬ ಒಮ್ಮತದ ಅಭಿಪ್ರಾಯ ಕೈಗೊಳ್ಳಲಾಯಿತು. ಆರೋಪ ಹೊತ್ತಿರುವವರು ಊರಿನಿಂದ ಹೊರ ಹೋಗಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲೆಯ ಇಬ್ಬರು ಪ್ರಭಾವಿ ಧಾರ್ಮಿಕ ಮುಖಂಡರು ಸ್ಥಳಕ್ಕೆ ಬಂದು ಸಂಧಾನ ನಡೆಸಿದರಾದರೂ ಪ್ರಯೋಜನ ಆಗಲಿಲ್ಲ ಎಂದೂ ತಿಳಿದು ಬಂದಿದೆ.

ADVERTISEMENT

ಗಡಿಗೌಡಗಾಂವ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಇರುವ ಕಾರಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.