ADVERTISEMENT

ಅಂಬೇಡ್ಕರ್ ಪುಸ್ತಕ ವಿತರಿಸಿದ ಶಿಕ್ಷಕ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 7:55 IST
Last Updated 17 ಏಪ್ರಿಲ್ 2021, 7:55 IST
ಔರಾದ್ ತಾಲ್ಲೂಕಿನ ಸಂತಪುರ ಸಿದ್ಧರಾಮೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಶಿಕ್ಷಕ ಮುತ್ತಣ್ಣ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಪುಸ್ತಕ ವಿತರಿಸಿದರು
ಔರಾದ್ ತಾಲ್ಲೂಕಿನ ಸಂತಪುರ ಸಿದ್ಧರಾಮೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಶಿಕ್ಷಕ ಮುತ್ತಣ್ಣ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಪುಸ್ತಕ ವಿತರಿಸಿದರು   

ಔರಾದ್: ತಾಲ್ಲೂಕಿನ ಸಂತಪುರ ಸಿದ್ಧರಾಮೇಶ್ವರ ಕಾಲೇಜಿನಲ್ಲಿ ಈಚೆಗೆ ನಡೆದ ಡಾ. ಬಿ.ಆರ್‌.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬೋರ್ಗಿ ಸರ್ಕಾರಿ ಶಾಲೆಯ ಸಂಪನ್ಮೂಲ ಶಿಕ್ಷಕ ಮುತ್ತಣ್ಣ ಅವರು ವಿದ್ಯಾರ್ಥಿಗಳಿಗೆ ಅಂಬೇಡ್ಕರ್‌ ಅವರ ಕುರಿತ ಪುಸ್ತಕಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ನಿರ್ದೇಶಕ ಡಾ. ಎಚ್.ಟಿ.ಪೋತೆ ಅವರು ರಚಿಸಿರುವ ಮತ್ತು ಬೆಂಗಳೂರಿನ ಸಪ್ನ ಬುಕ್ ಹೌಸ್‌ ಹೊರತಂದಿರುವ ಡಾ. ಬಿ.ಆರ್‌.ಅಂಬೇಡ್ಕರ್ ಪುಸ್ತಕದ 220 ಪ್ರತಿಗಳನ್ನು ಖರೀದಿಸಿ, ವಿದ್ಯಾರ್ಥಿಗಳಿಗೆ ವಿತರಿಸಿರುವೆ’ ಎಂದರು.

‘ಅಂಬೇಡ್ಕರ್‌ ಅವರ ಕುರಿತು ವಿದ್ಯಾರ್ಥಿಗಳು ಅರಿಯಲಿ. ಅವರು ಎದುರಿಸಿದ ಸಂಕಷ್ಟ ಮತ್ತು ಸವಾಲುಗಳು ಗೊತ್ತಾಗಲಿ. ಸಂವಿಧಾನ ರಚನೆಯ ಮಹತ್ವ ತಿಳಿಯಲಿಎಂಬ ಆಶಯ ನನ್ನದು’ ಎಂದು ಹೇಳಿದರು.

ADVERTISEMENT

ಕೆಎಎಸ್ ಅಧಿಕಾರಿ ಖಾಜಾ ಖಲೀಲುಲ್ಲ ಮತ್ತು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತನಾಡಿದರು. ಸಮಾಜದ ಬಗ್ಗೆ ಕಳಕಳಿ ಹೊಂದಿರುವ ಮುತ್ತಣ್ಣ ಅವರು ತಮ್ಮ ಊರಿನ ಜನರಲ್ಲಿ ಜಾಗೃತಿ ಮೂಡಿಸಿ, 100ಕ್ಕೂ ಹೆಚ್ಚು ಶೌಚಾಲಯಗಳನ್ನು ಕಟ್ಟಿಸುವಲ್ಲಿ ಸಹಕರಿಸಿದ್ದಾರೆ ಎಂದು ಶ್ಲಾಘಿಸಿದರು.

ಶಿಕ್ಷಕ ಮಹೇಂದ್ರಸಿಂಗ್ ಪಾಟೀಲ, ಉಪನ್ಯಾಸಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.