ADVERTISEMENT

ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 12:01 IST
Last Updated 14 ಜುಲೈ 2020, 12:01 IST
ಹುಮನಾಬಾದ್‍ನ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಸಿಡಿಪಿಒ ಶಿವಪ್ರಕಾಶ ಅವರಿಗೆ ಮನವಿ ಸಲ್ಲಿಸಿದರು
ಹುಮನಾಬಾದ್‍ನ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಸಿಡಿಪಿಒ ಶಿವಪ್ರಕಾಶ ಅವರಿಗೆ ಮನವಿ ಸಲ್ಲಿಸಿದರು   

ಹುಮನಬಾದ್: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಶಿವಪ್ರಕಾಶ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮಿತ್ರಾಬಾಯಿ ಜಮಾದಾರ ಮಾತನಾಡಿ,‘ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ನೌಕರರಿಗೆ ಎಲ್‍ಐಸಿ ಆಧರಿತ ನಿವೃತ್ತಿ ಸೌಲಭ್ಯ ಒದಗಿಸಬೇಕು.ಮೀಸಲಾತಿ ಮತ್ತು ಸೇವಾ ಹಿರಿತನದ ಆಧಾರದ ಮೇಲೆ ಮೇಲ್ವಿಚಾರಕಿಯರ ಹುದ್ದೆಗೆ ಮುಂಬಡ್ತಿ ನೀಡಬೇಕು’ ಎಂದು ಒತ್ತಾಯಿಸಿದರು.

ಅಂಗನವಾಡಿ ಸಹಾಯಕಿಯರಿಗೆ ಕಾರ್ಯಕರ್ತೆಯಾಗಿ ಮುಂಬಡ್ತಿ ನೀಡುವಾಗ ನಿಗದಿಪಡಿಸಿರುವ ವಯೋಮಿತಿಯನ್ನು ತೆಗೆಯಬೇಕು. ಖಾಯಂ ಮಾಡುವ ತನಕ ಸೇವಾ ಜೇಷ್ಠತೆ ಆಧಾರದ ಮೇಲೆ ಕಾರ್ಯಕರ್ತೆಯರಿಗೆ ₹30 ಸಾವಿರ ಮತ್ತು ಸಹಾಯಕಿಯರಿಗೆ ₹21 ಸಾವಿರ ಪ್ರೋತ್ಸಾಹಧನ ನೀಡಬೇಕು. ಖಾಲಿ ಇರುವ ಸಹಾಯಕಿಯರು ಹಾಗೂ ಕಾರ್ಯಕರ್ತೆಯರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಉಷಾ ಗುತ್ತೇದಾರ, ಕೋಶಾಧ್ಯಕ್ಷೆ ವಿಜಯಲಕ್ಷ್ಮಿ ಕಲ್ಲೂರು, ಜಗದೇವಿ ಪತ್ರಿ, ಆಶಾ ಬಡ್ದಾಳೆ, ಭಾರತಿ, ಶ್ವೇತಾ, ಪಾರ್ವತಿ ಹಾಗೂ ಜೈಶೀಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.